ಮಳೆ ಕೊಯ್ಲು
ಪೀಠಿಕೆ :- ನೀರು ಜೀವನಾವಶ್ಯಕ ವಸ್ತು. ಸಕಾಲಕ್ಕೆ ಮಳೆಯಾಗದೆ ನೀರಿನ ಕ್ಷಾಮ ಉಂಟಾಗುತ್ತಿದೆ. ಇಂದು ಅಂತರ್ಜಲದ ಮಟ್ಟ ಕುಸಿಯುತ್ತಿದೆ ಆದ್ದರಿಂದ ನೀರಿನ ಮೂಲಗಳನ್ನು ಸಂರಕ್ಷಿಸುವುದು ಇಂದಿನ ಅತ್ಯಗತ್ಯವಾದ ಕಾರ್ಯವಾಗಿದೆ. ಇಂತಹ ಕಾರ್ಯಗಳಲ್ಲಿ ಮಳೆಕೊಯ್ಲು ವಿಧಾನ ಸಹ ಒಂದಾಗಿದೆ.
ವಿಷಯ ನಿರೂಪಣೆ :- ಮಳೆ ನೀರು ಕೊಯ್ಲು ಎಂಬುದು ಮಳೆ ನೀರನ್ನು ಒಟ್ಟುಗೂಡಿಸುವ ಅಥವಾ ಶೇಖರಿಸಿಟ್ಟುಕೊಳ್ಳುವ ವಿಧಾನಕ್ಕಿರುವ ಹೆಸರು. ಕುಡಿಯುವ ನೀರನ್ನು ಒದಗಿಸಲು, ಜಾನುವಾರುಗಳಿಗೆ ನೀರುಣಿಸಲು, ನೀರಾವರಿಗಾಗಿ ನೀರಿನ ವ್ಯವಸ್ಥೆ ಮಾಡಲು ಅಥವಾ ಅಂತರ್ಜಲ ಪುನರ್ಭರ್ತಿಕಾರ್ಯ ಎಂದು ಕರೆಯಲಾಗುವ ಪ್ರಕ್ರಿಯೆಯೊಂದರಲ್ಲಿ ನೀರು ಪೊಟರೆಯನ್ನು ಪುನಃ ತುಂಬಿಸಲು ಮಳೆನೀರು ಕೊಯ್ಲು ಪದ್ದತಿಯನ್ನು ಬಳಸಿಕೊಂಡು ಬರಲಾಗಿದೆ. ಮನೆಗಳು, ಗುಡಾರಗಳು ಮತ್ತು ಸ್ಥಳೀಯ ಸಾರ್ವಜನಿಕ ಕಟ್ಟಡಗಳ ಛಾವಣಿಗಳಿಂದ ಸಂಗ್ರಹಿಸಲಾದ ಮಳೆನೀರು, ಕುಡಿಯುವ ನೀರಿಗೆ ತನ್ನದೇ ಆದ ಪ್ರಮುಖ ಕೊಡುಗೆಯನ್ನು ನೀಡಬಲ್ಲದು. ಛಾವಣಿಯ ಮಳೆನೀರು ಸಾಮಾನ್ಯವಾಗಿ ಉತ್ತಮ ಗುಣಮಟ್ಟದ್ದಾಗಿ ಇರುತ್ತದೆ, ಆದ್ದರಿಂದ ಬಳಕೆಗೆ ಮೊದಲು ಅದನ್ನು ಸಂಸ್ಕರಿಸುವ ಅಗತ್ಯ ಕಂಡು ಬರುವುದಿಲ್ಲ. ಸರಳವಾದ ವಿಧಾನದಿಂದ ಮೊದಲ್ಗೊಂಡು ಸಂಕೀರ್ಣವಾದ ಕೈಗಾರಿಕಾ ವ್ಯವಸ್ಥೆಗಳವರೆಗೆ ಮಳೆ ನೀರನ್ನು ಕೊಯ್ಲು ಮಾಡಲು ಹಲವಾರು ವಿವಿಧ ವ್ಯವಸ್ಥೆಗಳಿವೆ. ಸಾಮಾನ್ಯವಾಗಿ ಮಳೆನೀರನ್ನು ನೆಲದಿಂದ ಇಲ್ಲವೇ ಛಾವಣಿಯೊಂದರಿAದ ಕೊಯ್ಲು ಮಾಡಲಾಗುತ್ತದೆ. ಈ ಎರಡೂ ವ್ಯವಸೆÀ್ಥಗಳಿಂದ ನೀರನ್ನು ಸಂಗ್ರಹಿಸಬಹುದಾದ ವೇಗವು ಸದರಿ ವ್ಯವಸ್ಥೆಯ ಯೋಜನಾ ಪ್ರದೇಶ, ಅದರ ಸಾಮರ್ಥ್ಯ ಮತ್ತು ಮಳೆ ಸುರಿತದ ತೀವ್ರತೆಯನ್ನು ಅವಲಂಬಿಸಿರುತ್ತದೆ. ಮಳೆನೀರನ್ನು ಅಂತರ್ಜಲ ಪುನರ್ಭರ್ತಿ ಕಾರ್ಯಕ್ಕೂ ಬಳಸಬಹುದಾಗಿದ್ದು ಇದರಲ್ಲಿ ನೆಲದ ಮೇಲೆ ಹರಿಯುವ ಹೆಚ್ಚುವರಿ ಪ್ರಮಾಣದ ನೀರು ಸಂಗ್ರಹಿಸಲ್ಪಡುತ್ತದೆ ಹಾಗೂ ನೀರು ಹೀರಿಕೆಗೆ ಒಳಗಾಗುವುದರ ಮೂಲಕ ಅಂತರ್ಜಲದ ಪ್ರಮಾಣದಲ್ಲಿ ಹೆಚ್ಚಳವಾಗಲು ಕಾರಣವಾಗುತ್ತದೆ.
ಉಪಸಂಹಾರ:- ಸ್ಥಳೀಯವಾಗಿ ದೊರೆಯುವ ಹೆಚ್ಚು ದುಬಾರಿಯಲ್ಲದ ಸಾಮಗ್ರಿಗಳಿಂದ ಮಳೆನೀರು ಕೊಯ್ಲಿನ ವ್ಯವಸ್ಥೆಗಳನ್ನು ಸರಳವಾಗಿ ನಿರ್ಮಿಸಬಹುದು. ಬಹುತೇಕ ವಾಸಯೋಗ್ಯ ತಾಣಗಳಲ್ಲಿ ಇದು ಯಶಸ್ವಿಯಾಗಿದೆ. ಆದ್ದರಿಂದ ಜನರು ಈ ಬಗ್ಗೆ ಹೆಚ್ಚು ಗಮನಹರಿಸಿ, ತಮ್ಮತಮ್ಮ ಮನೆಗಳಲ್ಲಿ, ಹೊಲಗಳಲ್ಲಿ ಮಳೆನೀರು ಕೊಯ್ಲಿನ ವ್ಯವಸ್ಥೆ ಮಾಡಿಕೊಂಡರೆ ನೀರಿನ ಸಮಸ್ಯೆಯನ್ನು ಬಹುಮಟ್ಟಿಗೆ ನಿವಾರಿಸಿಕೊಳ್ಳಬಹುದಾಗಿದೆ ಎಂಬುದು ನನ್ನ ಅಭಿಪ್ರಾಯವಾಗಿದೆ.